Saturday, June 7, 2025

ಪರಸ್ಪರ ದ್ವೇಷದಿಂದ ಹರ್ಷನ ಕೊಲೆಯಾಗಿದೆ: ವಿಪಕ್ಷ ನಾಯಕ ಸಿದ್ಧರಾಮಯ್ಯ

ಮಂಗಳೂರು: ಶಿವಮೊದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಹೋಗಿಲ್ಲ ನಿಜ. ಯಾಕೆಂದರೆ ಅದೊಂದು ಕೊಲೆ. ಅದು ಪರಸ್ಪರ ದ್ವೇಷದಿಂದ ಆಗಿರೋದು. ಇದಕ್ಕೆ ರಾಜಕೀಯ ಬಣ್ಣ ಕಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಹರ್ಷನ ಕೊಲೆಗೂ ಹಿಜಾಬ್‌ ಗೂ ಸಂಬಂಧವಿಲ್ಲ. ಹರ್ಷ ಕೊಲೆಯ ನಂತರ ಆದ ಗಲಭೆಗಳಿಗೆ ಮಂತ್ರಿ ಈಶ್ವರಪ್ಪ ಕಾರಣ. ಅವರು 144 ಸೆಕ್ಷನ್‌ನ್ನು ಉಲ್ಲಂಘಿಸಿದ್ದಾರೆ ಎಂದರು.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ಬ್ಯಾನ್ ಮಾಡೋದಿದ್ರೆ ಮಾಡಿ. ಯಾರು ಬೇಡ ಅಂತಾರೆ? ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲಿದೆ. ನಾವು ಬ್ಯಾನ್ ಮಾಡೋದು ಬೇಡ ಎಂದು ಹೇಳಿದ್ದೇವಾ ಎಂದು ಸರ್ಕಾರವನ್ನು ಪ್ರಶ್ನಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles