ಹೆಬ್ರಿ: ಹೆಬ್ರಿಯಲ್ಲಿ ನೂತನ ಪೊಲೀಸ್ ಠಾಣೆಯ ಕಟ್ಟಡಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.



ಬಳಿಕ ಮಾತನಾಡಿದ ಸಚಿವರು ಹೆಬ್ರಿಯಲ್ಲಿ ಹಂತ ಹಂತವಾಗಿ ಎಲ್ಲ ಸರ್ಕಾರಿ ಕಟ್ಟಡಗಳು ನಿರ್ಮಾಣಗೊಳ್ಳುತ್ತಿದೆ. ಹೆಬ್ರಿ ಹೊಸ ತಾಲೂಕಾಗಿ ಘೋಷಣೆಯಾದ ಬಳಿಕ ಅತೀ ಶೀಘ್ರದಲ್ಲಿ ಸರ್ಕಾರಿ ಕಟ್ಟಡಗಳು ನಿರ್ಮಾಣಗೊಂಡಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ವಿಜಯ್ ಪ್ರಸಾದ್, ಸರ್ಕಲ್ ಇನ್ಸ್ ಪೆಕ್ಟರ್ ಸಂಪತ್ ಕುಮಾರ್, ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ.ಎಮ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಕುಂದಾಪುರದ ಉಪವಿಭಾಗದ ಅಸಿಸ್ಟೆಂಟ್ ಕಮಿಷನರ್ ಕೆ. ರಾಜು, ಹೆಬ್ರಿ ತಾಲೂಕು ತಹಶೀಲ್ದಾರ್ ಪುರಂದರ್.ಕೆ ಹಾಗೂ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಅರ್ಚಕ ನಾಗರಾಜ್ ಜೋಯಿಸ್ ಪೂಜಾ ವಿಧಿವಿಧಾನಗಳು ನೆರವೇರಿಸಿದರು.