Sunday, June 8, 2025

ಹೆಬ್ರಿ ಎಸ್‌ ಆರ್‌ ಸಮೂಹ ಶಿಕ್ಷಣ ಸಂಸ್ಥೆ ಆದರ್ಶ ಶಿಕ್ಷಣ ಸಂಸ್ಥೆ: ಸುಬುಧೇಂದ್ರ ತೀರ್ಥ ಶ್ರೀಪಾದರು

ಹೆಬ್ರಿ: ಕಲಿಯುಗದ ಕಾಮಧೇನು ಮಹಾಗುರು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ 25 ವರ್ಷಗಳ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಾವಿರ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಸುಸಜ್ಜಿತ ವ್ಯವಸ್ಥೆಯಲ್ಲಿ ನೀಡುತ್ತಿರುವ ಹೆಬ್ರಿ ಎಸ್‌ ಆರ್‌ ಸಮೂಹ ಶಿಕ್ಷಣ ಸಂಸ್ಥೆ ಆದರ್ಶ ಶಿಕ್ಷಣ ಸಂಸ್ಥೆ ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದರು ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಶನಿವಾರ ಹೆಬ್ರಿಯ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಪಟ್ಟದ ದೇವರ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.

ಅಭಿವೃದ್ಧಿಯ ಮೂಲಕ ಉನ್ನತ ಸ್ಥಾನದಲ್ಲಿರುವ ಈ ಸಂಸ್ಥೆ ನಮ್ಮ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿರುವುದು ನಮಗೆ ಖುಷಿ ನೀಡಿದೆ. ಯಾವದೇ ಕೊರೆತೆಯಿಲ್ಲದಂತೆ ವ್ಯವಸ್ಥಿತವಾದ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು, ಆಡಳಿತ ವರ್ಗಕ್ಕೆ ಒಳ್ಳೇಯದಾಗಲಿ, ಯಾವೂದಕ್ಕೂ ಮಣಿಯದೆ ಇನ್ನಷ್ಟು ಆದರ್ಶವಾಗಿ ಶಿಕ್ಷಣ ಸಂಸ್ಥೆಯನ್ನು ಬೆಳೆಸಿ ಮುನ್ನಡೆಸಿ ಎಂದು ಸ್ವಾಮೀಜಿ ಹಾರೈಸಿದರು.

ಎಸ್‌.ಆರ್‌ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.‌ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಸಪ್ನಾ ಎನ್‌ ಶೆಟ್ಟಿ, ಸಮಾಜ ಸೇವಕ ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಸ್ಥಳೀಯ ಗಣ್ಯರು, ಸಂಘಸಂಸ್ಥೆಗಳ ಪ್ರಮುಖರು, ಹೆಬ್ರಿ ಎಸ್‌.ಆರ್‌ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರಶಾಂತ್‌ ಕುಮಾರ್‌, ಉಪನ್ಯಾಸಕರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles