Monday, June 9, 2025

ಅತಿ ಹೆಚ್ಚು ತಂಬಾಕು ಸೇವನೆಯಿಂದ ಹೆಚ್ಚುತ್ತಿದೆ ಕ್ಯಾನ್ಸರ್: ಡಾ.ಶಶಾಂಕ್ ಆರ್ ಕಟೀಲ್

ಕಾರ್ಕಳ: ಫೆಬ್ರವರಿ 04 ರಂದು ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಹಾಗೂ ರೋವರ್ ಮತ್ತು ರೆಂಜರ್ಸ್ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಶಶಾಂಕ್ ಆರ್ ಕಟೀಲ್ ಅವರು ಅತಿ ಹೆಚ್ಚಾಗಿ ತಂಬಾಕು ಸೇವನೆ ಮಾಡುವವರೇ ಕ್ಯಾನ್ಸರ್ ರೋಗಕ್ಕೆ ಬಲಿಯಾಗುತ್ತಿದ್ದಾರೆಂದು ತಿಳಿಸಿದರು.
ಪ್ರಾಸ್ತವಿಕ ನುಡಿಗಳನ್ನಾಡಿದ ಕಿರಣ್ ಬಾಬು ಅವರು ಯುವ ಜನತೆಗಾಗಿ ಇಂತಹ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು, ಭಾರತವನ್ನು ಕ್ಯಾನ್ಸರ್ ಮುಕ್ತವಾಗಿ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವರ್ಮಾ ಅಜ್ರಿ ಅವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಆರೋಗ್ಯ ಮಿತ್ರ ಸಂಚಾಲಕಿ ಕೀರ್ತನ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿನ ಉಚಿತ ಚಿಕಿತ್ಸೆಯ ಕುರಿತು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭ ಯೂತ್ ರೆಡ್ ಕ್ರಾಸ್ ಸಂಚಾಲಕಿ ಯುವ ಚೇತನ ರೆಂಜರ್ ಲೀಡರ್ ಪ್ರೋ.ಸಂಧ್ಯಾ ಭಂಡಾರಿ, ರೋವರ್ ಲೀಡರ್ ಪ್ರೋ.ಕೃಷ್ಣಮೂರ್ತಿ ವೈದ್ಯ, ಸಹಾಯಕ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ ಪ್ರೋ.ವಿದ್ಯಾಧರ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿ ವಿನುತಾ ಪೂಜಾರಿ ಪ್ರಾರ್ಥನೆ ಮಾಡಿ, ನಿತ್ಯ ಜೈನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಧನ್ಯಶ್ರೀ ಕಾರ್ಯಕ್ರಮವನ್ನು ವಂದಿಸಿ, ಸೃಜನ ಕಾರ್ಯಕ್ರಮವನ್ನು ನಿರೂಪಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles