Sunday, June 8, 2025

ಹಿಜಾಬ್‌ ಪ್ರಕರಣ: ಹೈಕೋರ್ಟ್ ತ್ರಿಸದಸ್ಯ ಪೀಠದ ಅಂತಿಮ ತೀರ್ಪು ಬಿಡುಗಡೆ

ಬೆಂಗಳೂರು: ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಹಿಜಾಬ್‌ ಪ್ರಕರಣದ ತೀರ್ಪು ಮಂಗಳವಾರ ಪ್ರಕಟವಾಗಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ರಾಜ್ಯ ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪನ್ನು ನೀಡಿದೆ.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ತ್ರಿಸದಸ್ಯ ಪೀಠವು ಹಿಜಾಬ್‌ ಪ್ರಕರಣದ ಅಂತಿಮ ತೀರ್ಪನ್ನು ನೀಡಿದ್ದಾರೆ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಿಗದಿ ಪಡಿಸಿರುವ ಸಮವಸ್ತ್ರವನ್ನು ಮಾತ್ರ ಧರಿಸಬೇಕು. ಎಲ್ಲ ರಿಟ್ ಅರ್ಜಿಗಳನ್ನೂ ನ್ಯಾಯಪೀಠ ವಜಾಗೊಳಿಸಿದ್ದು, ಉಡುಪಿ ಕಾಲೇಜಿಗೆ ಪ್ರತ್ಯೇಕ ನಿರ್ದೇಶನ ನೀಡುವ ಅಗತ್ಯ ಇಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles