ನವದೆಹಲಿ: ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಗುರುವಾರ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದನ್ನು ತ್ವರಿತವಾಗಿ ವಿಚಾರಣೆಗೆ ಸ್ವೀಕರಿಸಿ, ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಹಿಜಾಬ್ ಧರಿಸಿ ಕಾಲೇಜು ಪ್ರವೇಶ ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್ ಈ ವಿಚಾರವಾಗಿ ಅಂತಿಮ ತೀರ್ಪು ನೀಡುವ ತನಕ ಧಾರ್ಮಿಕ ಗುರುತುಗಳನ್ನು ಸೂಚಿಸುವ ಉಡುಪು ಧರಿಸಬಾರದು ಎಂದು ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.