ಮಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟು ಹಿಡಿದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯೂನಿವರ್ಸಿಟಿ ಕಾಲೇಜಿನಲ್ಲಿ ಶನಿವಾರ ನಡೆದಿದೆ.
ಯೂನಿವರ್ಸಿಟಿ ಕಾಲೇಜಿನ 15ಮಂದಿ ವಿದ್ಯಾರ್ಥಿನಿಯರು ಶನಿವಾರ ಕಾಲೇಜಿಗೆ ಬುರ್ಖಾ ಧರಿಸಿ ಬಂದಿದ್ದು, ಬುರ್ಖಾವನ್ನು ತೆಗೆದು ಹಿಬಾಬ್ ಧರಿಸಿ ಲೈಬ್ರರಿಗೆ ಬಂದಿದ್ದಾರೆ. ಈ ವೇಳೆ ಲೈಬ್ರರಿಯ ಸಿಬ್ಬಂದಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರಿಗೆ ಪ್ರವೇಶಿಸಲು ನಿರ್ಬಂಧಿಸಿದ್ದಾರೆ. ಈ ಸಂದರ್ಭ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ಬಂದಿದ್ದು, ವಿದ್ಯಾರ್ಥಿನಿಯರ ಮನವೊಲಿಸಲು ಪ್ರಯತ್ನಿಸಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದ ತಣ್ಣಗಾಗಿದ್ದ ವೇಳೆ ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆ.