Saturday, June 7, 2025

ರಾಜ್ಯದ ವಿವಿದೆಡೆ ತಾರಕಕ್ಕೇರಿದ ಹಿಜಾಬ್ ಕೇಸರಿ ವಿವಾದ: ಉಡುಪಿ, ಮಂಡ್ಯ, ಬಾಗಲಕೋಟೆಯಲ್ಲಿ ಭಾರೀ ಹೈಡ್ರಾಮ

ಉಡುಪಿ: ರಾಜ್ಯ ಸರ್ಕಾರ ಸಮವಸ್ತç ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ವಿವಾದದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಮಂಗಳವಾರ ಹಿಜಾಬ್ ಕೇಸರಿ ಶಾಲು ವಿವಾದ ತಾರಕ್ಕೇರಿದ ಹಿನ್ನೆಲೆ ಕಾಲೇಜು ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.


ಇಂದು ಎಂಜಿಎಂ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೊಟ್ಟು ಕಾಲೇಜಿಗೆ ಬಂದ ಹಿನ್ನೆಲೆ ಅವರಿಗೆ ಕಾಲೇಜು ಪ್ರವೇಶಕ್ಕೆ ನಿರಾಕರಿಸಲಾಯಿತು. ಆದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಒಳಗೆ ಬಿಡುವಂತೆ ಪ್ರತಿಭಟಿಸಿದ್ದಾರೆ. ಈ ಸಂದರ್ಭ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಜೈ ಶ್ರೀ ರಾಮ್ ಘೊಷಣೆ ಕೂಗಿದ್ದಾರೆ. ಇನ್ನೊಂದೆಡೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು ವಿ ವಾಂಟ್ ಜಸ್ಟೀಸ್ ಎಂದು ಘೊಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಉಡುಪಿಯ ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿ ರಜೆಯನ್ನು ಘೊಷಣೆ ಮಾಡಲಾಗಿದೆ.


ಮಂಡ್ಯದ ಸರ್ಕಾರಿ ಕಾಲೇಜಿನಲ್ಲೂ ಕೂಡ ತಲೆ ಎತ್ತಿದ ಹಿಜಾಬ್ ವಿವಾದ ಇಂದು ತೀವ್ರ ಸ್ವರೂಪವನ್ನು ಪಡೆದುಕೊಂಡಿತು. ಬುರ್ಖಾ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯನ್ನು ಸುತ್ತುವರೆದ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಇದರಿಂದ ಕೋಪಗೊಂಡ ಯುವತಿ ಅಲ್ಲಾಹು ಅಕ್ಬರ್ ಎಂದು ಕೂಗಿದ್ದು, ತಕ್ಷಣಕ್ಕೆ ಕಾಲೇಜು ಸಿಬ್ಬಂದಿ ಯುವತಿಯನ್ನು ಕರೆದೊಯ್ದಿದ್ದಾರೆ.


ಬಾಗಲಕೋಟೆ ಜಿಲ್ಲೆಯ ರಬಕವಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಕೆಸರಿ ಶಾಲು ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಓರ್ವನ ತಲೆಗೆ ಕಲ್ಲು ತಗುಲಿ ಗಾಯವಾಗಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು, ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ರಾಮನಗರ, ಚಾಮರಾಜನಗರ, ಕುಂದಾಪುರ ಭಾಗದಲ್ಲಿ ಹಿಜಾಬ್ ವಿವಾದ ಉದ್ವಿಗ್ನ ಪರಿಸ್ಥಿತಿಯನ್ನು ತಲುಪಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles