ಯಾದಗಿರಿ: ಕರ್ನಾಟಕ ಹೈಕೋಟ್ನ ತ್ರಿಸದಸ್ಯ ಪೀಠ ಹಿಜಾಬ್ ಪ್ರಕರಣದ ಅಂತಿಮ ತೀರ್ಪನ್ನು ಮಂಗಳವಾರ ಪ್ರಕಟಿಸಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 35 ವಿದ್ಯಾರ್ಥಿನಿಯರು ಹಿಜಾಬ್ ತೀರ್ಪನ್ನು ವಿರೋಧಿಸಿ, ಪರೀಕ್ಷೆ ಧಿಕ್ಕರಿಸಿ ಕಾಲೇಜಿನಿಂದ ಹೊರನಡೆದಿದ್ದಾರೆ.
ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಯರು ಹಿಜಾಬ್ ತೀರ್ಪಿನ ಹಿನ್ನಲೆಯಲ್ಲಿ ಕಾಲೇಜಿಗಿಂತ ಹಿಜಾಬ್ ಮುಖ್ಯವೆಂದು ಕಾಲೇಜಿನಿಂದ ಹೊರನಡೆದಿದ್ದಾರೆ. ನಮಗೆ ಶಿಕ್ಷಣ, ಹಿಜಾಬ್ ಎರಡೂ ಮುಖ್ಯ. ಹಿಜಾಬ್ಗೆ ಅನುಮತಿ ನೀಡುವವರೆಗೆ ಕಾಲೇಜಿಗೆ ಹೋಗುವುದಿಲ್ಲ ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.
ಇಂದು ಹೈಕೋರ್ಟ್ನ ತ್ರಿಸದಸ್ಯ ಪೀಠ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ರಾಜ್ಯ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಿಗದಿ ಪಡಿಸಿರುವ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ತೀರ್ಪು ನೀಡಿತ್ತು.