ರಾಂಚಿ: ಇಬ್ಬರು ಕೋಬ್ರಾ ಸೈನಿಕರು ಐಇಡಿ ಸ್ಫೋಟದಲ್ಲಿ ಸೈನಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಾರ್ಖಂಡ್ನ ಲೋಹರ್ದಗಾ ಜಿಲ್ಲೆಯ ಬುಲ್ಬುಲ್-ಪೇಶ್ರಾರ್ ಪ್ರದೇಶದಲ್ಲಿ ನಡೆದಿದೆ.
ಕೋಬ್ರಾ ಸೈನಿಕರು ಹಾಗೂ ಜಾರ್ಖಂಡ್ ಪೊಲೀಸರು ಮಾವೋವಾದಿಗಳ ವಿರುದ್ಧ ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂದರ್ಭ ಉಗ್ರಗಾಮಿ ಪೀಡಿತ ಬುಲ್ಬುಲ್-ಪೆಶ್ರಾರ್ ಪ್ರದೇಶದಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.
ಸ್ಫೋಟದಲ್ಲಿ ಕೋಬ್ರಾ ಸೈನಿಕರಾದ ದಿಲೀಪ್ ಕುಮಾರ್ ಮತ್ತು ನಾರಾಯಣ ದಾಸ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ವಿಶೇಷ ವಿಮಾನದಲ್ಲಿ ರಾಂಚಿಗೆ ರವಾನಿಸಲಾಗಿದೆ ಎಂದು ಪೆಶ್ರಾರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ರಿಷಿ ಕುಮಾರ್ ತಿಳಿಸಿದ್ದಾರೆ. ಸ್ಫೋಟ ನಡೆಸಿದ ಉಗ್ರರನ್ನು ಹಿಡಿಯಲು ಶೋಧ ಕಾರ್ಯಾ ನಡೆಯುತ್ತಿದೆ.