Saturday, June 7, 2025

ಮಕ್ಕಳಲ್ಲಿ ಕೊರೊನಾ ಪ್ರಕರಣ ವರದಿಯಾದರೆ ಐದು ದಿನಗಳ ಕಾಲ ತರಗತಿ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ

ಉಡುಪಿ: ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅವರು ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಲ್ಲಿ ಐದು ದಿನ ಆಯಾ ತರಗತಿಗಳನ್ನು ಬಂದ್‌ ಮಾಡಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರ ಸೂಚನೆಯಂತೆ ಕೊರೊನಾ ಪ್ರಕರಣ ಮಕ್ಕಳಲ್ಲಿ ಕೊರೊನಾ ಪ್ರಕರಣ ವರದಿಯಾದರೆ ಐದು ದಿನಗಳ ಕಾಲ ಆ ತರಗತಿಯನ್ನು ಅಥವಾ ಆ ವಿಭಾಗವನ್ನು ಬಂದ್‌ ಮಾಡಲಾಗುತ್ತದೆ. ಆದರೆ ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರ ಮಾಡಿಲ್ಲ ಎಂದರು. ಈ ನಿರ್ಧಾರವನ್ನು ಜಿಲ್ಲೆಯ ತಜ್ಞರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೆಲವು ನಿರ್ದೇಶನ ನೀಡಲಾಗಿದೆ. ಅವರಿಂದ ವರದಿ ಪಡೆಯುತ್ತಿದ್ದೇವೆ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles