ಮಂಗಳೂರು: ಮರಳು ಮಾಫಿಯಾದಿಂದ ಕಮಿಷನ್ ಪಡೆದಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಹರತಾಳು ಹಾಲಪ್ಪ ತಮ್ಮ ಬೆಂಬಲಿಗರೊಂದಿಗೆ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ‘ನಾವಾಗಲಿ ನಮ್ಮ ಸಂಗಡಿಗರಾಗಲೀ ಕಮಿಷನ್ ಪಡೆದಿಲ್ಲ’ ಎಂದು ಆಣೆ ಪ್ರಮಾಣ ಮಾಡಿದ್ದಾರೆ.
ಬಳಿಕ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಈ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ವಿನಾ ಕಾರಣ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆಣೆ ಪ್ರಮಾಣದ ಸವಾಲು ಹಾಕಿ ಈಗ ಪಲಾಯನ ಮಾಡುತ್ತಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಈ ವಿಚಾರದಲ್ಲಿ ನನ್ನ ತಪ್ಪಿಲ್ಲ ಎಂದು ನಾನು ಆಣೆ ಪ್ರಮಾಣ ಮಾಡಿದ್ದೇನೆ ಎಂದರು.