Sunday, June 8, 2025

ಆಕಸ್ಮಿಕವಾಗಿ ಎದುರಾಗುವ ಪ್ರಕರಣಗಳು ರೋಗವಿದ್ದಂತೆ: ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್

ಕುಂದಾಪುರ: ನ್ಯಾಯಾಂಗದ ಮೇಲೆ ಗುರುತರ ಜವಾಬ್ದಾರಿಗಳಿರುತ್ತದೆ. ಕೆಲವೊಮ್ಮೆ ಆಕಸ್ಮಿಕವಾಗಿ ಎದುರಾಗುವ ಪ್ರಕರಣಗಳು ರೋಗವಿದ್ದಂತೆ. ರೋಗಿ ವೈದ್ಯರ ಬಳಿ ಹೋಗುವಂತೆ ಕಕ್ಷಿದಾರರು ನ್ಯಾಯಕ್ಕಾಗಿ ಬರುತ್ತಾರೆ. ಕುಂದಾಪುರ ಭಾಗದಲ್ಲಿ ರೈತರು ಹಾಗೂ ಕೃಷಿಕರು ಜಾಸ್ತಿ. ಪ್ರಕರಣದ ಹಿನ್ನೆಲೆಗೆ ಬಂದವರಿಗೆ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಿ ಕೊಡಿ. ಮೋಟಾರು ವಾಹನದ ಅಪಘಾತ ಪರಿಹಾರದಲ್ಲಿ ಪರ್ಸಂಟೇಜ್ ಪಡೆಯುವ ವ್ಯವಸ್ಥೆ, ಇನ್ವೆಸ್ಟ್ ಮೆಂಟ್ ಲಿಟಿಗೇಶನ್ ಮಾಡಬೇಡಿ ಎಂದು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕುಂದಾಪುರ ಹೊಸ ಬಸ್ ನಿಲ್ದಾಣದ ಬಳಿಯ ನ್ಯಾಯಾಲಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ನ್ಯಾಯಾಲಯ ಮತ್ತು ವಕೀಲರ‌ ಸಂಘದ ಕಟ್ಟಡದ ಉದ್ಘಾಟಿಸಿ ಮಾತನಾಡಿದ ಅವರು ಸಣ್ಣ ಜಾಗದಲ್ಲಿ ಸುಂದರ ನ್ಯಾಯಾಲಯ ಕಟ್ಟಡ ನಿರ್ಮಾಣವಾಗಿದೆ. ಮಹಿಳಾ ವಕೀಲರು ಸೇರಿದಂತೆ ಎಲ್ಲರ ಆದ್ಯತೆಯನ್ನು ಪರಿಗಣಿಸಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಹಳೆ ನ್ಯಾಯಾಲಯ ಕಟ್ಟಡದ ದುರಸ್ತಿಗೆ ಆದ್ಯತೆ ನೀಡಬೇಕು. ನ್ಯಾಯಾಲಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ನ್ಯಾಯಾಧೀಶರನ್ನು ನೀಡುವುದು ಉಚ್ಛ ನ್ಯಾಯಾಲಯ ಹಾಗೂ ಸರ್ಕಾರದ ಜವಾಬ್ದಾರಿ ಎಂದರು.

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮಾತನಾಡಿ ಕುಂದಾಪುರದಲ್ಲಿ ಕಾರ್ಯಾ ನಿರ್ವಹಿಸುತ್ತಿರುವ 5 ನ್ಯಾಯಾಲಯಗಳ ಅವಶ್ಯಕತೆಗಾಗಿ ಅಂದಾಜು 6 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಒಳ್ಳೆಯ ವಾತಾವರಣದಲ್ಲಿ ನ್ಯಾಯದಾನ ಪ್ರಕ್ರಿಯೆಗಳು ನಡೆಯುವುದರಿಂದ ಎಲ್ಲರಿಗೂ ಒಳಿತಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ರಂಗಸ್ವಾಮಿ ನಟರಾಜ್ ಮಾತನಾಡಿ ನ್ಯಾಯಾಲಯಕ್ಕೆ ಬರುವ ಕಕ್ಷಿದಾರರು ಹಾಗೂ ಇತರರಿಗೆ ಒಳ್ಳೆಯ ವಾತಾವರಣದ ಅವಶ್ಯಕತೆಯಿದೆ. ನೂತನವಾಗಿ ಆರಂಭಿಸಲಾಸ ಇ-ಸೇವಾ ಕೇಂದ್ರದ ಉಪಯೋಗ ಪಡೆದುಕೊಳ್ಳಬೇಕು. ಮುಂಬರುವ ರಾಷ್ಟ್ರೀಯ ಲೋಕ ಅದಾಲತ್‌ಗೆ ಎಲ್ಲರ ಸಹಕಾರ ಬೇಕು. ನ್ಯಾಯಾಲಯಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕೇಳಿ ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ನೂತನ ಕಟ್ಟಡದಲ್ಲಿ ಪ್ರಾರಂಭಿಸಲಾದ ಇ-ಸೇವಾ ಕೇಂದ್ರ, ಸಹಾಯವಾಣಿ ಕೇಂದ್ರ ಹಾಗೂ ವಿಡಿಯೋ ಕಾನ್ಫರೆನ್ಸ್ ಕೊಠಡಿಯ ಉದ್ಘಾಟನೆ ನಡೆಯಿತು. ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಕಾಂತರಾಜು ಬಿ.ಟಿ ಅವರನ್ನು ಕುಂದಾಪುರ ವಕೀಲರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಟಿ.ಜಿ ಶಿವಶಂಕರೇ ಗೌಡ, ಕರ್ನಾಟಕ ಸರ್ಕಾರದ ಕಾನೂನು ಇಲಾಖೆಯ ಪ್ರಧಾನ‌ ಕಾರ್ಯದರ್ಶಿಗಳಾದ ಟಿ.ವೆಂಕಟೇಶ್ ನಾಯ್ಕ್ , ಸಮೀರ್ ನಜೀರ್, ಅರ್ಚನಾ ನಟರಾಜ್, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಕಾಂತರಾಜು.ಬಿ.ಟಿ ಹಾಗೂ ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಪ್ರಮೋದ್ ಹಂದೆ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಸ್ವಾಗತಿಸಿ, ಕುಂದಾಪುರ ವಕೀಲರ‌ ಸಂಘದ ಅಧ್ಯಕ್ಷ ಸಳ್ವಾಡಿ ನಿರಂಜನ್ ಹೆಗ್ಡೆ ವಂದಿಸಿ, ಉಪಾಧ್ಯಕ್ಷ ರಾಘವೇಂದ್ರ ಚರಣ್ ನಾವಡ ನಿರೂಪಿಸಿ, ಮಾಲಿನಿ ರಮೇಶ್ ಪ್ರಾರ್ಥಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles