ಮಂಗಳೂರು: ಉಕ್ರೇನ್ನಲ್ಲಿ ಯಾರಾದರೂ ದ.ಕ.ದವರು ಇದ್ದರೆ ಮಾಹಿತಿ ನೀಡುವಂತೆ ದ.ಕ.ಜಿಲ್ಲಾಡಳಿತ ಮನವಿ ಮಾಡಿದ ಹಿನ್ನಲೆಯಲ್ಲಿ ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಮಂಗಳೂರು ವಿದ್ಯಾರ್ಥಿಗಳು ದ.ಕ. ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.
ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಪಡೀಲ್ ವಿದ್ಯಾರ್ಥಿ, ಹಾಗೂ ಮೂರನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ದೇರಬೈಲ್ ವಿದ್ಯಾರ್ಥಿನಿ ಫೆ.26 ರಂದು ಮಂಗಳೂರಿಗೆ ಆಗಮಿಸಬೇಕಾಗಿತ್ತು. ಆದರೆ ಉಕ್ರೇನ್ನಲ್ಲಿ ವಾಯುಪ್ರದೇಶ ಮುಚ್ಚಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಉಕ್ರೇನ್ನಲ್ಲೇ ಉಳಿದಿದ್ದಾರೆ. ವಿದ್ಯಾರ್ಥಿಗಳು ಕ್ಷೇಮವಾಗಿರುವುದಾಗಿ ಮನೆಯವರಿಗೆ ತಿಳಿಸಿದ್ದಾರೆ. ಈ ಕುರಿತು ದ.ಕ.ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.