Thursday, June 19, 2025

ಕುಖ್ಯಾತ ದರೋಡೆಕೋರನನ್ನ ಬಂಧಿಸಿದ ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್

ಕುಂದಾಪುರ: ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಅನೇಕ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರನನ್ನು ಬಂಧಿಸಲಾಗಿದೆ. ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದ ಅಪರಾಧ ಪತ್ತೆ ದಳದ ತಂಡ ಮುಂಬಯಿ ಬಳಿಯ ಕೇಂದ್ರಾಡಳಿತ ಪ್ರದೇಶವಾದ ದಮನ್ ಎಂಬಲ್ಲಿ ಬಂಧಿಸಿ ಕರೆತಂದಿದ್ದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮೂಲತಃ ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ನಿವಾಸಿ ಪ್ರಸ್ತುತ ಮಹಾರಾಷ್ಟ್ರದಲ್ಲಿ ವಾಸವಿರುವ ವಿಜಯ್ (48) ಬಂಧಿತ ಆರೋಪಿ. ಈತನಿಗೆ ಮೇ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಬಂಧಿತ ಆರೋಪಿಯಿಂದ 24.4 ಗ್ರಾಂ ತೂಕದ ಒಂದು ಚಿನ್ನದ ಸರ, 38.6 ಗ್ರಾಂ ತೂಕದ ಕರಿಮಣಿ ಸರ, ಮೋಟಾರ್ ಸೈಕಲ್, ಮೊಬೈಲ್ ಸಹಿತ 3,25,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಬೈಕಿನ ಚಲನವಲನಗಳ ಮೇಲೆ ನಿಗಾಯಿಟ್ಟ ಪೊಲೀಸರು ಸಿಸಿಟಿವಿ ಫೂಟೇಜ್ ಆಧಾರದಲ್ಲಿ ಆತನ ಪತ್ತೆಗೆ ಮುಂದಾಗಿದ್ದು, ಆಧುನಿಕ ತಂತ್ರಜ್ಞಾನಗಳ ಸಹಕಾರದಲ್ಲಿ ವಿಜಯ್ ಅವರನ್ನು ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ಹಾಗೂ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಕೆ. ಅವರ ಸೂಚನೆಯಂತೆ ಇನ್‌ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ತನಿಖಾ ಪಿಎಸ್‌ಐ ವಿನಯ ಎಂ. ಕೊರ್ಲಹಳ್ಳಿ ಅಪರಾಧ ವಿಭಾಗದ ಸಿಬಂದಿ ಮೋಹನ ಪೂಜಾರಿ, ಶ್ರೀಧರ, ಪ್ರಿನ್ಸ್ ಕೆ.ಜೆ., ರಿತೇಶ್, ಕೃಷ್ಣದೇವಾಡಿಗ, ಅಣ್ಣಪ್ಪ ಪೂಜಾರಿ, ಚಾಲಕ ಚಂದ್ರ ಪೂಜಾರಿ, ಕೋಟ ಠಾಣೆಯ ರಾಘವೇಂದ್ರ ಶೆಟ್ಟಿ ಆರ್.ಡಿ. ಸೆಲ್ ವಿಭಾಗದ ಶಿವಾನಂದ, ದಿನೇಶ ಕಾರ್ಯಾಚರಣೆಯಲ್ಲಿದ್ದರು.
ಇನ್ನು, ಪ್ರಕರಣದ ಇನ್ನೋರ್ವ ಆರೋಪಿ ಸತ್ಸಿಂಗ್ ವಿರಮ್ ಸಿಂಗ್ ಸಂದು ಅಲಿಯಾಸ್ ಬಬ್ಬು ಸರ್ದಾರ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles