ಬೆಂಗಳೂರು: ಇವತ್ತಿನ ಪರಿಸ್ಥಿತಿಯಲ್ಲಿ ವಿದ್ಯುತ್ ದರ ಏರಿಕೆ ಮಾಡುವುದು ಅಗತ್ಯವಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಕೆಲವು ಯೋಜನೆಗಳನ್ನು ಪ್ರಾರಂಭಿಸುತ್ತಿದ್ದೇವೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂ ಎಸ್ ಎಸ್ಪಿ ಸೇರಿ ವಿವಿಧ ಇಲಾಖೆಗಳಿಂದ 12 ಸಾವಿರ ಕೋಟಿಯಷ್ಟು ಹಣ ಬರುವುದು ಬಾಕಿ ಇದೆ. ಕೆಇಆರ್ ಸಿ – ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸ್ಸು ಮಾಡಿದಲ್ಲಿ ವಿದ್ಯುತ್ ದರ ಏರಿಕೆ ಮಾಡುವುದು ಅಗತ್ಯ. ಅವರು ನೀಡುವ ವರದಿಯ ಮೇರೆಗೆ ದರ ಏರಿಕೆ ಮಾಡಬೇಕೊ ಬೇಡವೋ ಎನ್ನುವುದನ್ನು ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.