ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಸೋಮವಾರ ಬೆಳಿಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋತ್ ಅವರು ಜಂಟಿ ಅದಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು.
ಮಂಗಳವಾರದಿಂದ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭವಾಗಲಿದ್ದು, ಇಂದಿನಿಂದ ಆರಂಭಗೊಳ್ಳುವ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆ.25ರವರೆಗೆ ನಡೆಯಲಿವೆ.