Tuesday, June 17, 2025

ಗ್ರಾಮ ಸಂಪರ್ಕ ಅಭಿಯಾನದ ಝೋನಲ್ ಸಂಘಟನಾ ಉಸ್ತುವಾರಿಯಾಗಿ ಕೆ.ಮಥಾಯಿ, ಶಾಂತಲಾ ದಾಮ್ಲೆ ನೇಮಕ

ಮಂಗಳೂರು: ಆಮ್ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನದ ಝೋನಲ್ ಸಂಘಟನಾ ಉಸ್ತುವಾರಿಯಾಗಿ ಆಮ್ ಆದ್ಮಿ ಪಾರ್ಟಿಯ ಮುಖಂಡ ಹಾಗೂ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ಹಾಗೂ ಮಹಿಳಾ ಮುಖಂಡೆ ಶಾಂತಲಾ ದಾಮ್ಲೆ ಅವರು ನೇಮಕಗೊಂಡಿದ್ದಾರೆ. ಆಪ್ ದೆಹಲಿ ನಾಯಕ ಕರ್ನಾಟಕ ಚುನಾವಣೆ ಉಸ್ತುವಾರಿ ದಿಲೀಪ್ ಪಾಂಡೆ ನೇಮಕಗೊಳಿಸಿದ್ದಾರೆ. ಇತ್ತಿಚೆಗೆ ನಡೆದ ಪಕ್ಷದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರಕನ್ನಡ ಜಿಲ್ಲೆಗಳನ್ನೊಳಗೊಂಡ ಝೋನ್ ಉಸ್ತುವಾರಿಯನ್ನು ಕೆ.ಮಥಾಯಿ ಹಾಗೂ ಧಾಮ್ಲೆ ವಹಿಸಿಕೊಂಡಿದ್ದಾರೆ.

ಮಥಾಯಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಿವಾಸಿಯಾಗಿದ್ದು, ಬೆಂಗಳೂರಿನ ಬಿಬಿಎಂಪಿ ಸಹಿತ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ಹೊರತೆಗೆದಿದ್ದಾರೆ. ಈ ಕಾರಣಕ್ಕೆ ತನ್ನ 18 ವರ್ಷದ ಸೇವೆಯಲ್ಲಿ 28 ಬಾರಿ ವರ್ಗಾವಣೆಗೊಂಡಿದ್ದರು. ನಿವೃತ್ತಿ ಪಡೆದ ಮಥಾಯಿ ಆಪ್ ಸೇರಿದ್ದಾರೆ.
ಈ ಸಂದರ್ಭ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಮುಖರಾದ ದಿವಾಕರ ಸನಿಲ್, ಶಾಂತಲಾ ದಾಮ್ಲೆ, ವಿಜಯ ಶರ್ಮ, ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮೊದಲಾದವರು ಇದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles