ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಪತ್ತೆ ಮಾಡಲು ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಾಂತ್ರಿಕ ಸಿಬ್ಬಂದಿ, ತಜ್ಞರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗೂ ಅವರ ಪರವಾನಗಿಯನ್ನು ರದ್ದು ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ತಿಳಿಸಿದ್ದಾರೆ.
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯ. ನಾವು ಭ್ರೂಣ ಹತ್ಯೆಯ ವಿರುದ್ಧ ಜಾಗೃತಿ ಮತ್ತು ಲಿಂಗ ಸಮಾನತೆ ತರಲು ಪ್ರಯತ್ನ ಮಾಡಬೇಕು. 2001 ರಲ್ಲಿ 1,000 ಪುರುಷರಿಗೆ 946 ಯುವತಿಯರಿದ್ದರು, 2018 ರಲ್ಲಿ 1,000 ಪುರುಷರಿಗೆ 957 ಯುವತಿಯರಿದ್ದಾರೆ. ಹೀಗೆ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ಆಶಾದಾಯಕ ವಿಚಾರ. ಹೆಣ್ಣು ಮಕ್ಕಳ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧ ಎಂದು ತಿಳಿಸಿದ್ದಾರೆ.