Saturday, June 7, 2025

ಕಂಬಳಗದ್ದೆ ಬೆಟ್ಟು: ಅಂಗನವಾಡಿ ಕೇಂದ್ರ ಸ್ಥಳಾಂತರ; ಪೋಷಕರ ಅಸಮಾಧಾನ

ಕುಂದಾಪುರ: ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಸಮೀಪದ ಕಂಬಳಗದ್ದೆ ಬೆಟ್ಟಿನಲ್ಲಿರುವ ಕದ್ರಿಕಟ್ಟೆ ಅಂಗನವಾಡಿ ಕೇಂದ್ರ ಸ್ಥಳಾಂತರವಾಗುತ್ತದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರದ ಎದುರು ಪೋಷಕರು ಜಮಾಯಿಸಿ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಶುಕ್ರವಾರ ನಡೆದಿದೆ.

ದಶಕಗಳ ಹಿಂದೆ ಈ ಭಾಗದಲ್ಲಿ ಅಂಗನವಾಡಿ ನಿರ್ಮಿಸಲಾಗಿತ್ತು. ಪ್ರಸ್ತುತ ಈ ಅಂಗನವಾಡಿಯಲ್ಲಿ 16 ಮಕ್ಕಳಿದ್ದಾರೆ. ದಾನಪತ್ರದ ಮೂಲಕ ದಾನಿಯೊಬ್ಬರು ಈ ಜಾಗ ಅಂಗನವಾಡಿ ಕೇಂದ್ರಕ್ಕೆ ಬಿಟ್ಟು ಕೊಟ್ಟಿದ್ದು 5 ವರ್ಷಗಳ ಹಿಂದೆ ಜಾಗದ ತಕರಾರು ನ್ಯಾಯಾಲಯದ ಮೆಟ್ಟಿಲೇರಿತ್ತೆನ್ನಲಾಗಿದೆ. ಸದ್ಯ ಅಂಗನವಾಡಿ ಕೇಂದ್ರ ಕೆಡವಿ, ಸ್ಥಳಾಂತರಿಸಲಾಗುತ್ತದೆ ಎಂಬ ಮಾಹಿತಿ ತಿಳಿದ ಪೋಷಕರು ಕಂಗಾಲಾಗಿದ್ದಾರೆ.

ಮಕ್ಕಳನ್ನು ಬೇರೆ ಅಂಗನವಾಡಿ ಕೇಂದ್ರಕ್ಕೆ ಕಳಿಸುವುದು ಅಸಾಧ್ಯ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರು ರಸ್ತೆ ದಾಟಿಸುವುದು ಕಷ್ಟವಾಗುತ್ತದೆ. ಅಲ್ಲದೆ ಗರ್ಭಿಣಿಯರು, ಬಾಣಂತಿಯರು ಕೂಡ ಪೌಷ್ಟಿಕಾಹಾರ ಪಡೆಯಲು ಇಲ್ಲಿನ ಅಂಗನವಾಡಿ ಕೇಂದ್ರ ಬಿಟ್ಟು ಬೇರೆಡೆ ತೆರಳುವುದು ಅಸಾಧ್ಯ ಎಂದು ಸ್ಥಳೀಯರು ಹಾಗೂ ಪೋಷಕರು ತಿಳಿಸಿದ್ದಾರೆ.

ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಈ ವೇಳೆ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಖಂಡಿಸಿದರು.

ಕೋಟ ಗ್ರಾ.ಪಂ‌ ಸದಸ್ಯೆ ಗುಲಾಬಿ ಪೂಜಾರಿ, ಕೋಟ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಐರೋಡಿ, ಮಣೂರು ಶಕ್ತಿ ಕೇಂದ್ರದ ಮಹೇಶ್ ಹೊಳ್ಳ, ಅಭಿಷೇಕ್ ಅಂಕದಕಟ್ಟೆ ಮತ್ತಿತರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles