ಕಾರ್ಕಳ: ವಿದ್ಯಾರ್ಥಿಗಳ ಕೊರತೆಯಿಂದಾಗಿ ಕನ್ನಡ ಸರಕಾರಿ ಶಾಲೆಗಳು ಮುಚ್ಚುತ್ತಿವೆ ಇದರಿಂದಾಗಿ ಕನ್ನಡ ಶಾಲೆಗಳು ಅಪಾಯದಂಚಿನಲ್ಲಿವೆ ಎಂದು ಮಾಜಿ ಕಸಾಪ ರಾಜ್ಯಾದ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.
ಅವರು ಗುರುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಕಳ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪದ ಪ್ರದಾನಗೈದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಾಳ್ಳಿ ಪ್ರಭಾಕರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭ ಸಾಹಿತ್ಯ ಸಂಘದ ಕಾರ್ಯಧ್ಯಕ್ಷ ಕೆ.ಪಿ.ಶೆಣೈ, ರಂಗ ಸಂಸ್ಕೃತಿಯ ಅಧ್ಯಕ್ಷ ನಿತ್ಯಾನಂದ ಪೈ, ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್, ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ, ಮುಂಡ್ಕೂರು ವಿದ್ಯಾವರ್ಧಕ ಸಂಸ್ಥೆಯ ಪ್ರಾಂಶುಪಾಲ ದೇವಾದಾಸ್ ಮೊದಲಾದವರು ಉಪಸ್ಥಿತರಿದ್ದರು.
ಅವನಿ, ಧಾರಿಣಿ ಪ್ರಾರ್ಥಿಸಿ, ಗಣೇಶ್ ಜಾಲ್ಸೂರ್ ನಿರೂಪಿಸಿದರು.