Sunday, June 8, 2025

ಕನ್ನುಕೆರೆ ಕೆರೆಯ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ, ಕನ್ನುಕೆರೆ ಕೆರೆಯ ಅಭಿವೃದ್ಧಿ ಮಂಡಳಿ ಕನ್ನುಕೆರೆ ಸಂಯುಕ್ತ ಆಶ್ರಯದಲ್ಲಿ ತೆಕ್ಕಟ್ಟೆ ಗ್ರಾ.ಪಂ., ಕನ್ನುಕೆರೆ ಫ್ರೆಂಡ್ಸ್ ಕನ್ನುಕೆರೆ, ರೋಟರಿ ಕ್ಲಬ್ ತೆಕ್ಕಟ್ಟೆ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕನ್ನುಕೆರೆ ಇವರ ಸಹಭಾಗಿತ್ವದಲ್ಲಿ ‘ನಮ್ಮೂರು ನಮ್ಮ‌ಕೆರೆ’ ಅಭಿವೃದ್ಧಿ ಯೋಜನೆ ಅಡಿ ಕನ್ನುಕೆರೆ ಕೆರೆಯ ಪುನರುಜ್ಜೀವನ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ, ನೀರಿನ ಅಂತರ್ಜಲ ಮಟ್ಟ ಕುಸಿಯಲು ಬಿಟ್ಟರೆ ಮುಂದಿನ ದಿನದಲ್ಲಿ ಬಹಳಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ. ಕೆರೆಕಟ್ಟೆಗಳಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳಲು ಅವಕಾಶ ಮಾಡಿದರೆ ಎಲ್ಲರಿಗೂ ಉತ್ತಮ. ಈ ನಿಟ್ಟಿನಲ್ಲಿ ಡಾ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ ದಂಪತಿಗಳ ‘ನಮ್ಮೂರು ನಮ್ಮ‌ಕೆರೆ’ ಯೋಜನೆ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಮಲ್ಯಾಡಿ ಶಿವರಾಮ್ ಶೆಟ್ಟಿ, ಪರ್ತಕರ್ತ ವಸಂತ್ ಗಿಳಿಯಾರ್, ಉದ್ಯಮಿ ವಿಠ್ಠಲ ಶೆಟ್ಟಿ ಕೊರ್ಗಿ, ಧ.ಗ್ರಾ ಯೋಜನೆ ಜಿಲ್ಲಾ ನಿರ್ದೇಶಕ ಗಣೇಶ್ ಬಿ., ಕುಂದಾಪುರ ತಾಲ್ಲೂಕು ಜನಜಾಗೃತಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಧ.ಗ್ರಾ ಯೋಜನೆ ವಲಯ ಅಧ್ಯಕ್ಷೆ ಜಯಂತಿ ಕಾಂಚನ್, ಉದ್ಯಮಿ ಸಂತೋಷ್ ನಾಯಕ್ ತೆಕ್ಕಟ್ಟೆ, ಗಣಪತಿ ನಾಯಕ್, ಸಮಾಜ ಸೇವಕ ಗಣೇಶ್ ಪುತ್ರನ್, ಮಂಜುನಾಥ ಕಾಂಚನ್, ತೆಕ್ಕಟ್ಟೆ ಗ್ರಾ.ಪಂ. ಸದಸ್ಯೆ ಪ್ರತಿಮಾ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles