Sunday, June 8, 2025

ಕಾರ್ಕಳ: ಕಲ್ಲು ಗಣಿಗಾರಿಕೆ ವಿರುದ್ಧ ಬೃಹತ್ ಪ್ರತಿಭಟನೆ

ಕಾರ್ಕಳ: ಜನವಸತಿ ಪ್ರದೇಶದಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ಬಳಸಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಅಜೆಕಾರು ಗ್ರಾಮಸ್ಥರು ರೈತ ಸಂಘದ ಬೆಂಬಲದೊಂದಿಗೆ ಮರ್ಣೆ ಗ್ರಾಮದ ಬೊಂಡುಕುಮೇರಿ ಕಲ್ಲಚ್ಚಿ ಕ್ರಶರ್ ಮುಂದೆ ಪ್ರತಿಭಟನೆ ನಡೆಸಿದರು.
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಬೊಂಡುಕುಮೇರಿ ಕಲ್ಲಚ್ಚಿ ಎಂಬಲ್ಲಿನ ಜನವಸತಿ ಪ್ರದೇಶದ ಸುತ್ತಮುತ್ತಲಿನ ಸರ್ಕಾರಿ ಜಾಗದಲ್ಲಿ ಕಾನೂನಿಗೆ ವಿರುದ್ಧವಾಗಿ ಕಲ್ಲು ಗಣಿಗಾರಿಕೆ ಹಾಗೂ ಕ್ರಶರ್ ಉದ್ಯಮ ನಡೆಸುತ್ತಿದ್ದಾರೆ. ಇದು ಇಲ್ಲಿನ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು ತಕ್ಷಣವೇ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಂಡು ಕ್ರಶರ್ ಮುಚ್ಚಿಸಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನೆಯಲ್ಲಿ ಎಚ್ಚರಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಎನ್.ಎಸ್.ವರ್ಮ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಜನವಸತಿ ಪ್ರದೇಶದ ಹತ್ತಿರವೇ ಕಲ್ಲು ಗಣಿಗಾರಿಕೆಗೆ ಅಧಿಕಾರಿಗಳು ಕಾನೂನು ಬಾಹಿರವಾಗಿ ಅನುಮತಿ ನೀಡಿದ್ದಾರೆ. ಕ್ರಶರ್ ಗಣಿಗಾರಿಕೆ ಪ್ರದೇಶದಲ್ಲಿ ಸುಮಾರು 20 ಮನೆಗಳಿದ್ದು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಯಾವುದೇ ಮುನ್ಸೂಚನೆಯಿಲ್ಲದೇ ಪ್ರಬಲ ಡೈನಾಮೈಟ್ ಬಳಸಿ ಸ್ಫೋಟ ನಡೆಸುವಾಗ ಸಿಡಿಯುವ ಕಲ್ಲುಗಳು ಜನ ವಸತಿ ಪ್ರದೇಶಗಳಿಗೆ ಬೀಳುತ್ತಿದ್ದು, ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೆ ಹಾಗೂ ದನಕರುಗಳ ಜೀವಕ್ಕೆ ಅಪಾಯಕಾರಿ ಪರಿಣಮಿಸಿದೆ ಮಾತ್ರವಲ್ಲದೇ ಸ್ಫೋಟದ ತೀವ್ರತೆಗೆ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ ಎಂದು ಆರೋಪಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles