ಕಾರ್ಕಳ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಕಳದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂದೆಯೂ ನಡೆಯಬಾರದು. ಕಾನೂನಿಗೆ ಧಕ್ಕೆ ತರುವಂತಹ ಕಾರ್ಯಕ್ಕೆ ಯಾರು ಮುಂದಾಗಬಾರದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸಾರ್ವಜನಿಕರು, ಧಾರ್ಮಿಕ ಮುಖಂಡರು ಸಹಕಾರ ನೀಡಬೇಕೆಂದು ಗ್ರಾಮಾಂತರ ಪೊಲೀಸ್ ಠಾಣೆ ಎಸ್ ಐ ತೇಜಸ್ವಿ ಹೇಳಿದರು.
ಕಾರ್ಕಳ ಅತ್ಯಂತ ಶಾಂತಿ ಸಾಮರಸ್ಯದ ಊರೆಂದು ಗುರುತಿಸಿ ಕೊಂಡಿದೆ. ಈ ಹಿರಿಮೆಯನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ನಗರ ಪೊಲೀಸ್ ಠಾಣೆ ಎಸ್ಐ ಪ್ರಸನ್ನ ಎಂ.ಎಸ್ ಹೇಳಿದರು.
ವಿದ್ಯಾ ದೇಗುಲದಲ್ಲಿ ವಿಷ ಬೀಜ ಬಿತ್ತುವ ಕಾರ್ಯವಾಗುತ್ತಿರುವುದು ಅತ್ಯಂತ ಬೇಸರದ ಸಂಗತಿ. ಕಾರ್ಕಳದಲ್ಲಿ ಈ ತರ ಯಾವುದೇ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಪುರಸಭಾ ಸದಸ್ಯ ಆಶ್ಫಕ್ ಹೇಳಿದರು.
ನಗರ ಠಾಣೆ ಅಪರಾಧ ವಿಭಾಗದ ಎಸ್ ಐ ದಾಮೋದರ್, ಗ್ರಾಮಾಂತರ ಠಾಣೆ ಯ ಎಸ್ ಐ ಜನಾರ್ಧನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.