Sunday, June 8, 2025

ಪಂಚಸೂತ್ರಗಳ ಆಧಾರದಲ್ಲಿ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‌

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈ ಬಾರಿಯ ಬಜೆಟ್‌ ಅನ್ನು ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಮಂಡಿಸುತ್ತಿದ್ದು, 2022-23 ನೇ ಸಾಲಿನ ಬಜೆಟ್‌ ಗಾತ್ರ 2,65,720 ಕೋಟಿಯಾಗಿದೆ. ಕಳೆದ ಬಾರಿಯ ಬಜೆಟ್‌ ಅನುದಾನಕ್ಕಿಂತ ಈ ಬಾರಿ ಶೇಕಡಾ 7.7ರಷ್ಟು ಹೆಚ್ಚಳವಾಗಿದೆ.

ಪಂಚಸೂತ್ರಗಳು:

  • ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ
  • ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ- ಶಿಕ್ಷಣ, ಉದ್ಯೋಗ, ಆರೋಗ್ಯ, ಸಬಲೀಕರಣ ಕಾರ್ಯಕ್ರಮ
  • ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಹಾಗೂ ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ
  • ಕೃಷಿ, ಕೈಗಾರಿಕೆ, ಸೇವಾವಲಯ ಪಾಲುದಾರಿಕೆ ಜತೆ ಅಭಿವೃದ್ಧಿ
  • ನವಭಾರತಕ್ಕಾಗಿ ನವ ಕರ್ನಾಟಕ – ಹೊಸ ಚಿಂತನೆ, ಹೊಸ ಚೈತನ್ಯದ ಜೊತೆ ಹೊಸ ಮುನ್ನೋಟ

ಯಾವ ಇಲಾಖೆಗೆ ಎಷ್ಟು ಅನುದಾನ?

ಆಹಾರ – 2,288 ಕೋಟಿ, ವಸತಿ – 3,594 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ – 4,713 ಕೋಟಿ, ಕೃಷಿ & ತೋಟಗಾರಿಕೆ – 8,457 ಕೋಟಿ, ಸಮಾಜ ಕಲ್ಯಾಣ – 9,389 ಕೋಟಿ, ಲೋಕೋಪಯೋಗಿ – 10,447 ಕೋಟಿ, ಒಳಾಡಳಿತ ಮತ್ತು ಸಾರಿಗೆ – 11,222 ಕೋಟಿ, ಜಲ ಸಂಪನ್ಮೂಲ – 20,601 ಕೋಟಿ, ಶಿಕ್ಷಣ – 31,980 ಕೋಟಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ – 17,325 ಕೋಟಿ, ನಗರಾಭಿವೃದ್ಧಿ – 16,076 ಕೋಟಿ, ಕಂದಾಯ – 16,388 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ – 13,982 ಕೋಟಿ, ಇಂಧನ – 12,655 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles