ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ನಿಧನವಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಎರಡು ದಿನಗಳ ಕಾಲ ಶೋಕಾಚರಣೆಯನ್ನು ಆಚರಿಸಲು ನಿರ್ಧಾರಮಾಡಿದೆ.
ಈ ಎರಡು ದಿನಗಳ ಕಾಲ ಸರ್ಕಾರಿ ಕಟ್ಟಡದ ಮೇಲೆ ಹಾರುವ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ. ಹಾಗೂ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ನಡೆಸದಂತೆ ಸೂಚಿಸಿದೆ. ಕೇಂದ್ರ ಸರ್ಕಾರವೂ ಸಹ ಲತಾ ಮಂಗೇಶ್ಕರ್ ಅವರಿಗೆ ಗೌರವ ನೀಡುವ ಸಲುವಾಗಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಿದೆ. ಹಾಗೂ ಲತಾ ಮಂಗೇಶ್ವರ್ ಅವರ ಅಂತಿಮ ವಿಧಿ ವಿಧಾನಗಳನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದೆ.