ಕುಂದಾಪುರ: ಮೇ 10ರಂದು ಕಾಣಿಕೆ ಹುಂಡಿಯ ಎಣಿಕೆ ನಡೆದಿದ್ದು 1 ಕೋಟಿ 53 ಲಕ್ಷದ 41 ಸಾವಿರದ 923 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. 2.500 ಕೆಜಿ ಬಂಗಾರ ಮತ್ತು 4.200 ಕೆಜಿ ಬೆಳ್ಳಿ ಕೂಡ ಸಂಗ್ರಹವಾಗಿದೆ.
ಕೋವಿಡ್ ನಿರ್ಬಂಧಗಳ ಸಡಿಲಿಕೆಯ ಬಳಿಕ ಕಳೆದ ಜನವರಿಯಿಂದ ಪ್ರತಿನಿತ್ಯ ಕನಿಷ್ಠ 10 ಸಾವಿರ ಭಕ್ತರು ಆಗಮಿಸುತ್ತಿದ್ದಾರೆ. ದೇಗುಲದಲ್ಲಿ ಅತೀ ಹೆಚ್ಚು ಅಂದರೆ 1.53 ಕೋಟಿ ರೂ. ಕಾಣಿಕೆ ರೂಪದ ಹಣ ಸಂಗ್ರಹವಾಗಿರುವುದು ಇದೇ ಮೊದಲ ಬಾರಿಯಾಗಿದೆ.
ಸಾಮಾನ್ಯವಾಗಿ ಪ್ರತೀ ತಿಂಗಳು ಎಣಿಕೆ ನಡೆಯುತ್ತಿದ್ದು, ಸರಾಸರಿ 65ಲಕ್ಷ ರೂ.ಸಂಗ್ರಹವಾಗುತ್ತಿತ್ತು. 4 ತಿಂಗಳ ಹಿಂದೆ ಎಣಿಕೆಯಲ್ಲಿ 1.39ಕೋಟಿ ರೂ. ಹಣ ಸಂಗ್ರಹವಾಗಿತ್ತು.