Wednesday, June 18, 2025

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ನಗರ ಹೊರ ವಲಯದ ವಾಮಂಜೂರಿನಲ್ಲಿ ನಡೆದಿದೆ. ವಾಮಂಜೂರು ಸಮೀಪದ ಶಾಲೆಪದವು ನಿವಾಸಿ ಹರಿಶ್ಚಂದ್ರ ಪೂಜಾರಿ ಮೃತಪಟ್ಟ ಕಾರ್ಮಿಕ.

ಹರಿಶ್ಚಂದ್ರ ಪೂಜಾರಿ ಎನ್ನುವ ಕಾರ್ಮಿಕ ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲಾಗಲೇ ಹರಿಶ್ಚಂದ್ರ ಪೂಜಾರಿ ಮೃತಪಟ್ಟಿದ್ದಾರೆ. ಸುರಕ್ಷತಾ ಕ್ರಮ ಅನುಸರಿಸದೇ ಕೆಲಸ ಮಾಡಿಸಿದ ಗುತ್ತಿಗೆದಾರರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles