ಮಂಗಳೂರು: ಹಿಜಾಬ್ ವಿವಾದದ ಮಧ್ಯೆ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಬೇಕು ಎಂದು ಹಿಂದೂ ಮಹಾಸಭಾದ ಮುಖಂಡ ಧರ್ಮೇಂದ್ರ ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿಶ್ವದ ಅನೇಕ ದೇಶಗಳಾದ ಶ್ರೀಲಂಕಾ, ಟರ್ಕಿ, ಫ್ರಾನ್ಸ್ ಇನ್ನಿತರ ದೇಶಗಳಲ್ಲಿ ಬುರ್ಖಾ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಬುರ್ಖಾವು ಕ್ರೂರ ಕೃತ್ಯಕ್ಕೆ ಬಳಕೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸದಂತೆ ಮುಸ್ಲಿಂ ಧರ್ಮಗುರುಗಳು ಫತ್ವಾ ಹೊರಡಿಸಬೇಕು. ಈ ಮೂಲಕ ಬುರ್ಖಾ ದುರ್ಬಳಕೆ ಆಗುವುದನ್ನು ತಡೆಯಬೇಕು. ಹಾಗೇ ಬುರ್ಖಾದ ಪಾವಿತ್ರ್ಯತೆ ಉಳಿಸಿಕೊಳ್ಳಬೇಕೆಂದು ಹಿಂದೂ ಮಹಾಸಭಾ ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯಿಸಿದೆ.