ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ರಘುಪತಿ ಭಟ್ಗೆ ವಿದೇಶಗಳಿಂದ ಹಾಗೂ ಸ್ಥಳೀಯ ಕೆಲವು ನಂಬರ್ಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಘುಪತಿ ಭಟ್ ನಿರಂತರವಾಗಿ ವಿದೇಶಗಳಿಂದ ಇಂಟರ್ನೆಟ್ ಕರೆ ಬರುತ್ತಿದ್ದು, ಮುಸಲ್ಮಾನರ ವಿರುದ್ಧ ನೀನು ಮೆರೆದಾಡಬೇಡ, ನಿನ್ನನ್ನು ಹೇಗೆ ನಿಯಂತ್ರಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಬೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮೌಖಿಕವಾಗಿ ಮಾಹಿತಿ ನೀಡಿರುವ ರಘುಪತಿ ಭಟ್, ನಾವು ಇಂತಹ ಬೆದರಿಕೆಗಳನ್ನು ತುಂಬಾ ನೋಡಿದ್ದೇವೆ. ಉಡುಪಿ, ಬೆಂಗಳೂರಿನ ಮುಸಲ್ಮಾನರು ನನ್ನ ಬೆಂಬಲಕ್ಕಿದ್ದಾರೆ. ಉಡುಪಿಯ ಮುಸ್ಲಿಂ ಒಕ್ಕೂಟ ಖಾಜಿಗಳು ನನಗೆ ಬೆಂಬಲ ನೀಡಿದ್ದಾರೆ ಎಂದರು.