Sunday, June 8, 2025

ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯಲ್ಲಿ ಮುಖ್ಯಾಧಿಕಾರಿಯಿಂದ ಲೋಪ: ಮರುಪ್ರಕ್ರಿಯೆ ನಡೆಸುವಂತೆ ಕಾಂಗ್ರೆಸ್ ಆಗ್ರಹ

ಕಾರ್ಕಳ: ಕಾರ್ಕಳ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯಲ್ಲಿ ಮುಖ್ಯಾಧಿಕಾರಿಗಳು ಏಕಪಕ್ಷೀಯ ಧೋರಣೆಯನ್ನು ತೋರಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಹೊಸ ಸ್ಥಾಯಿ ಸಮಿತಿಯನ್ನು ರಚಿಸಿ, ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ಪಕ್ಷದ ಸದಸ್ಯರು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಗೆೆ ಮಂಗಳವಾರದಂದು ಮನವಿಯನ್ನು ಸಲ್ಲಿಸಲಾಯಿತು.


ಕಾರ್ಕಳ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸಮಾನ ಮತವನ್ನು ಹೊಂದಿದ್ದರೂ, ಮುಖ್ಯಾಧಿಕಾರಿ ರೂಪಾ ಶೆಟ್ಟಿಯವರು ಒತ್ತಡಕ್ಕೆ ಮಣಿದು ಸದ್ರಿ ಸಭೆಯಲ್ಲಿ ಬಿಜೆಪಿಯವರಿಗೆ ಮಾತ್ರ ಆಯ್ಕೆಗೆ ಅವಕಾಶ ನೀಡಿದ್ದಾರೆ. ಮುಖ್ಯಾಧಿಕಾರಿಗಳ ಈ ನಡೆ ಕಾಂಗ್ರೆಸ್ ಸದಸ್ಯರ ಹಕ್ಕಿಗೆ ಚ್ಯುತಿಯನ್ನುಂಟು ಮಾಡಿದೆ ಎಂದು ಆರೋಪಿಸಿ, ಈಗಾಗಲೇ ನೇಮಕಗೊಂಡಿರುವ ಸ್ಥಾಯಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಹೊಸ ಸ್ಥಾಯಿ ಸಮಿತಿಯನ್ನು ರಚಿಸುವಂತೆ ಉಡುಪಿ ಜಿಲ್ಲಾಧಿಖಾರಿಯವರಿಗೆ ಮನವಿಯನ್ನು ಸಲ್ಲಿಸಲಾಯ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles