ಮಣಿಪಾಲ: ಲಾರಿಯೊಂದು ಸುಜುಕಿ ಆಕ್ಸಿಸ್ ಸ್ಕೂಟರ್ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸ್ಕೂಟರ್ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಉಡುಪಿಯಿಂದ ಡಿಸಿ ಆಫೀಸ್ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಸುಜುಕಿ ಅಕ್ಸಿಸ್ ಸ್ಕೂಟರ್ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ರಸ್ತಗೆ ಅಪ್ಪಳಿಸಿದ ಸ್ಕೂಟರ್ನ ಪೆಟ್ರೋಲ್ ಟ್ಯಾಂಕ್ ಹಾನಿಯಾಗಿ ಕ್ಷಣಾರ್ಧದಲ್ಲಿ ಸ್ಕೂಟರ್ಗೆ ಬೆಂಕಿಹತ್ತಿಕೊಂಡಿದೆ. ತಕ್ಷಣವೇ ಧಾವಿಸಿದ ಸಮೀಪದ ಮ್ಯಾಕ್ಸ್ ಬಟ್ಟೆ ಮಳಿಗೆಯ ಸಿಬ್ಬಂದಿ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ಆರಿಸಿದರು. ಇದರಿಂದಾಗಿ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದೆ.