ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನವಾಬ್ ಮಲ್ಲಿಕ್ ಅವರನ್ನು ಬುಧವಾರ ಇ.ಡಿ. ಅಧಿಕಾರಿಗಳು ಬಂಧಿಸಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಅಂಡರ್ವರ್ಲ್ಡ್ನ ಇನ್ನಿತರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ವಿಷಯವಾಗಿ ಜಾರಿ ನಿರ್ದೇಶನಾಲಯವು ನವಾಬ್ ಮಲ್ಲಿಕ್ ಅವರನ್ನು ವಿಚಾರಣೆ ನಡೆಸಿದೆ. ವಿಚಾರಣೆ ಮುಗಿದ ತಕ್ಷಣ ಇ.ಡಿ. ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.