Sunday, June 8, 2025

ಮಂಗಳೂರು: ಫೆ.15ರವರೆಗೆ ಕೊರೊನಾ ನಿಯಂತ್ರಣ ಪರಿಷ್ಕೃತ ಮಾರ್ಗಸೂಚಿ ಜಾರಿ

ಮಂಗಳೂರು: ಕೊರೊನಾ ವೈರಸ್‌ ಹರಡುವುದನ್ನು ನಿಯಂತ್ರಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೊರೊನಾ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯಲ್ಲಿ ಸೂಚಿಸಿರುವಂತೆ ಜಿಲ್ಲೆಯಾದ್ಯಂತ ಜನವರಿ 31ರಿಂದ ಜಾರಿಗೆ ಬರುವಂತೆ ಪ್ರತಿ ದಿನ ರಾತ್ರಿ 10ಗಂಟೆಯಿಂದ ಮುಂಜಾನೆ 5ಗಂಟೆಯವರೆಗೆ ವಿಧಿಸಲಾಗಿದ್ದ ನೈಟ್‌ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ. ಡಬಲ್ ಡೋಸ್ ಕೊರೊನಾ ಲಸಿಕೆಯನ್ನು ಪಡೆದವರಿಗೆ ಮಾತ್ರ ಹೋಟೆಲ್, ಬಾರ್‌ & ರೆಸ್ಟೋರೆಂಟ್, ಪಬ್, ಕ್ಲಬ್ ಗಳಲ್ಲಿ ಶೇ.50ರ ಮಿತಿಯನ್ನು ರದ್ದುಗೊಳಿಸಿ ಶೇ.100ರಷ್ಟು ಆಸನ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ.

ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರಗಳಲ್ಲಿ ಶೇ.50ರಷ್ಟು ಆಸನಗಳ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ. ರ‍್ಯಾಲಿ, ಧರಣಿ, ಸಮಾವೇಶ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳಿಗೆ ನಿರ್ಬಂಧವನ್ನು ವಿಧಿಸಲಾಗಿದೆ. ದೇವಾಲಯ, ಸ್ಟೇಡಿಯಂ, ಈಜುಕೊಳ ಮತ್ತು ಜಿಮ್‌ಗಳಲ್ಲಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಶೇ. 100ರಷ್ಟು ನೌಕರರು ಹಾಜರಾಗಿ ಕರ್ತವ್ಯವನ್ನು ನಿರ್ವಹಿಸಬಹುದು. ಮದುವೆಗಳಿಗೆ ಹೊರಾಂಗಣದಲ್ಲಿ 300 ಜನರಿಗೆ, ಒಳಾಂಗಣದಲ್ಲಿ 200ಜನರಿಗೆ ಅವಕಾಶವನ್ನು ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಯನ್ವಯ ಕೇರಳದಿಮದ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳ ಚೆಕ್‌ಪೋಸ್ಟ್‌ ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸಲಾಗುವುದು.

ಯಾವುದೇ ವ್ಯಕ್ತಿ, ಜನರ ಗುಂಪು, ಸಮುದಾಯ, ಸಂಘ, ಸಂಸ್ಥೆ, ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಇತ್ಯಾದಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಕಲಂ 51 ರಿಂದ 60ರ ಅನ್ವಯ ಐಪಿಸಿ ಕಲಂ 188ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2022ರ ಕಲಂ, 4, 5 ಮತ್ತು 10ರಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚನೆ ನೀಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles