ಮಂಗಳೂರು: ಹೈಟೆಕ್ ವೇಶ್ಯಾವಾಟಿಕೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವೆಯ ಹೆಸರಿನಲ್ಲಿ ದ.ಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಅಬ್ದುಲ್ ರಾಝೀಕ್ ಎಂಬ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ತನಿಖೆ ವೇಳೆ ರಾಝೀಕ್ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರೋದು ಬೆಳಕಿಗೆ ಬಂದಿದೆ. ಈತ ಎನ್ಜಿಒ ಮೂಲಕ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವುದಾಗಿ ತಿಳಿಸಿದ್ದಾನೆ. ವಿಐಪಿ ಗಳ, ಅಧಿಕಾರಿಗಳ ಜೊತೆ ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುತ್ತಾನೆ. ಕಮೀಷನರ್ ಕಛೇರಿಗೂ ಭೇಟಿ ನೀಡಿ ನನ್ನ ಜೊತೆಯೂ ಫೋಟೋ ತೆಗೆಸಿಕೊಂಡಿದ್ದ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಯಾಗುತ್ತಿದ್ದಂತೆಯೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರಾಝೀಕ್ ಮತ್ತೆ ಮಂಗಳೂರಿಗೆ ವಾಪಾಸಾಗುತ್ತಿದ್ದಂತೆ ಬಂಧನ ಮಾಡಿದ್ದೇವೆ. ಬಾಲಕಿಯ ಅತ್ಯಾಚಾರ ಮಾಡಿರೋದಕ್ಕೆ ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕಿವೆ. ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ತನಿಖೆಯನ್ನು ಮುಂದುವರಿಸಿದ್ದೇವೆ ಎಂದರು.