Tuesday, June 10, 2025

ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಉತ್ಸವಕ್ಕೆ ಚಾಲನೆ

ಕುಂದಾಪುರ: ಮಾ.18 ರಿಂದ 27 ರವರೆಗೆ ನಡೆಯಲಿರುವ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಉತ್ಸವಕ್ಕಾಗಿ ಬೆಳಿಗ್ಗೆ ದೇವಸ್ಥಾನದ ಅರ್ಚಕ ಹಾಗೂ ತಂತ್ರಿ ಕೆ.ರಾಮಚಂದ್ರ ಅಡಿಗ ಅವೆ ನೇತ್ರತ್ವದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಅಂಕುರಾವಾಸ ಸಿಂಹ ಯಾಗವನ್ನು ನಡೆಸಿ, 10 ಗಂಟೆಗೆ ಧ್ವಜ ಮರಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಜಾತ್ರಾ ಮಹೋತ್ಸವದ ಆರಂಭದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಂಜೆ ಯಾಗಶಾಲಾ ಪ್ರವೇಶ, ರಜ್ಜು ಬಂಧನ, ಮುಹೂರ್ತಬಲಿ, ಭೇರಿತಾಡನ, ಕೌತುಕ ಬಂಧನದ ಬಳಿಕ ರಾತ್ರಿ ನಗರೋತ್ಸವ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ.ಮಹೇಶ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯಕ್, ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲಕುಮಾರ ಶೆಟ್ಟಿ, ಜಯಾನಂದ ಹೋಬಳಿದಾರ, ಗಣೇಶ್ ಕಿಣಿ ಬೆಳ್ವೆ, ಗೋಪಾಲಕೃಷ್ಣ ನಾಡ, ಕೆ.ಪಿ.ಶೇಖರ, ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಅರ್ಚಕರಾದ ನಾರ್ಸಿ ಗೋವಿಂದ ಅಡಿಗ, ಕೆ. ಎನ್. ಸುಬ್ರಹ್ಮಣ್ಯ ಅಡಿಗ, ಸುರೇಶ ಭಟ್, ಗಜಾನನ ಜೋಯಿಸ್ ಮತ್ತಿತರರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles