ಬಂಟ್ವಾಳ: ಕಳೆದೆರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ಬೆಟ್ಟದಿಂದ ಬೃಹತ್ ಬಂಡೆ ಕಲ್ಲು ಕುಸಿದು ಮಂಗಳವಾರ ರಸ್ತೆಗೆ ಜಾರಿ ಬಿದ್ದಿದೆ.
ಘಟನೆಯಿಂದ ಕಾರಿಂಜ ರಸ್ತೆಗೆ ಮರ ಉರುಳಿ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರ ನೆರವಿನಿಂದ ರಸ್ತೆಯಲ್ಲಿದ್ದ ಮರಗಳನ್ನು ತೆರವು ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಗುಡ್ಡದಲ್ಲಿರುವ ಕೆಲವು ಮರಗಳಿಗೆ ಹಾನಿಯಾಗಿದೆ.
ಕಳೆದ ವರ್ಷ ಬಹಳ ಬೇಸಿಗೆ ಕಾಲದಲ್ಲಿ ಕಾರಿಂಜೇಶ್ವರನ ಸನ್ನಿಧಿ ಯ ಎಡಭಾಗದಲ್ಲಿ ಮಣ್ಣು ಕುಸಿದು ಬಿದ್ದು ಬಳಿಕ ತಡೆಗೋಡೆ ಕಟ್ಟಲಾಗಿತ್ತು. ಕಾರಿಂಜೇಶ್ವರನ ಗುಡ್ಡದಲ್ಲಿ ನಡೆಯುವ ಆಕ್ರಮ ಕಲ್ಲಿನ ಕೋರೆಯ ಪರಿಣಾಮ ಕಲ್ಲು ಕುಸಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಬಳಿಕ ಕೋರೆಗಳ ಬಂದ್ ಮಾಡಲು ಹೋರಾಟಗಳು ನಡೆದಿತ್ತು.