ಬೆಂಗಳೂರು: ರಾಜ್ಯದಲ್ಲಾಗುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನಲೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ಫೆ.16 ರ ವರೆಗೆ ರಜೆಯನ್ನು ವಿಸ್ತರಿಸಲಾಗಿದೆ.
ಈ ಹಿಂದೆ ಮುಂಜಾಗ್ರತಾ ಕ್ರಮವಾಗಿ ಫೆ.14 ರವರೆಗೆ ರಜೆಯನ್ನು ನೀಡಲಾಗಿತ್ತು. ಇದೀಗ ಫೆ.16 ರವರೆಗೆ ರಜೆ ವಿಸ್ತರಿಸಲಾಗಿದೆ. ಇಲಾಖೆ ವ್ಯಾಪ್ತಿಗೆ ಬರುವಂತಹ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು, ವಿಶ್ವವಿದ್ಯಾಲಯಗಳು, ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗುತ್ತದೆ. ಈ ವೇಳೆ ಆನ್ಲೈನ್ ಪಾಠಗಳು ಎಂದಿನಂತೆ ನಡೆಯುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.