ವಿಟ್ಲ: ಮುಸ್ಲಿಂ ಯುವಕನೋರ್ವ ಪ್ರೀತಿಸು ಎನ್ನುವುದಾಗಿ ಪೀಡಿಸಿದ ಹಿನ್ನೆಲೆ ಯುವಕನ ಕಾಟ ತಾಳಲಾರದೇ ಅಪ್ರಾಪ್ತ ಬಾಲಕಿಯೊರ್ವಳು ಸಾವನ್ನಪ್ಪಿರುವ ಘಟನೆ ವಿಟ್ಲದ ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು 14 ವರ್ಷದ ಆತ್ಮಿಕ ಎಂದು ಗುರುತಿಸಲಾಗಿದೆ.
ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ, ಈ ಹಿನ್ನೆಲೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಲೆ. ಸದ್ಯಕ್ಕೆ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಲಾಗಿದ್ದು, ಆದರೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಬಾಲಕಿ ಮನೆಯವರು ಆರೋಪಿಸಿದ್ದಾರೆ.
ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ ಹಾಕಿಸಿ ಅವಳನ್ನು ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಆ ಹುಡುಗಿಯ ಮನೆಯವರು ಆರೋಪಿಸಿದ್ದಾರೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯವಾಗಿದೆ ಎಂದು ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಹುಡುಗಿಯ ಮನೆಗೆ ಹೋಗಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ ಅಲ್ಲದೆ, ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರ ಮೇಲೆ ಕೊಲೆ ಮೊಕ್ಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.