Sunday, June 22, 2025

ಅಮೃತ ನಿರ್ಮಲ ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಹಣ ದುರ್ಬಳಕೆ: ಸದಸ್ಯ ಸೋಮನಾಥ್ ನಾಯ್ಕ್ ಆರೋಪ

ಕಾರ್ಕಳ: ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಜನವರಿ 20ರ ಗುರುವಾರದಂದು ನಡೆಯಿತು. ಸಭೆಯಲ್ಲಿ ಅನೇಕ ವಿಷಯಗಳು ಚರ್ಚೆಯಾಗಿದ್ದು, ಪುರಸಭಾ ಸದಸ್ಯರು ಹಾಗೂ ಮುಖ್ಯಧಿಕಾರಿಗಳ ಮೇಲೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ನಡೆಯಿತು.


ಕಾರ್ಕಳ ಪುರಸಭೆಯ ಅಮೃತ ನಿರ್ಮಲ ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿದ್ದ ಒಂದು ಕೋಟಿ ರೂ. ವನ್ನು ದುರ್ಬಳಕೆ ಮಾಡಲಾಗಿದೆ ಎನ್ನುವ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. ಆಡಳಿತ ಪಕ್ಷ, ಅಧಿಕಾರಿ ವರ್ಗದವರು ಹಾಗೂ ಯಾವುದೇ ಸದಸ್ಯರ ಗಮನಕ್ಕೆ ತರದೇ ಈ ಹಣವನ್ನು ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪುರಸಭಾ ಸದಸ್ಯರಾದ ಸೋಮನಾಥ ನಾಯ್ಕ್ ಅವರು ನೇರ ಆರೋಪವನ್ನು ಮಾಡಿದರು.


ಈ ಆರೋಪಕ್ಕೆ ಪ್ರತ್ಯುತ್ತರವನ್ನು ನೀಡಿದ ಮುಖ್ಯಾಧಿಕಾರಿಗಳು ಈ ವಿಚಾರವನ್ನು ಅಧ್ಯಕ್ಷರ ಗಮನಕ್ಕೆ ತಂದು ನಿರ್ಣಯ ಮಾಡಿರುವುದಾಗಿ ತಿಳಿಸಿದರು. ಈ ಕುರಿತು ಮಾತನ್ನು ಮುಂದುವರಿಸಿದ ವಿರೋದ ಪಕ್ಷದ ನಾಯಕರಾದ ಆಶ್ಪಕ್ ಅಹಮದ್‌ರವರು, ಹಾಗದರೆ ಸದಸ್ಯರ ಗಮನಕ್ಕೆ ತಾರದೇ, ತುರ್ತುಸಭೆಯನ್ನು ಕರೆಯದೇ ಹಿಂದಿನ ಸಭೆಯ ಪತ್ರಿಕೆಯಲ್ಲಿ ಸದಸ್ಯರೆಲ್ಲರೂ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತೆಂದು ಹೇಗೆ ದಾಖಲೆ ಮಾಡಿದ್ದೀರಿ ಎಂದು ಪಶ್ನಿಸುವುದರ ಮೂಲಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ತದನಂತರ ಚರ್ಚೆಯ ಮುಂದುವರಿದ ಭಾಗವಾಗಿ ಮುಂಡ್ಲಿ ಜಲಾಶಯದ 230 ಗೇಟ್ ಹಾಗೂ ಮರದ 30 ಗೇಟ್‌ಗಳ ಕಳ್ಳತನದ ಪ್ರಕರಣ ಬಗ್ಗೆ ತನಿಖೆ ಹಂತದಲ್ಲಿದ್ದು ಈ ಬಗ್ಗೆ ಅಧಿಕಾರಿಗಳು ಈ ಬಗ್ಗೆ ಚಕಾರೆತ್ತದೆ ಮೌನವಾಗಿರುವುದು ಇನ್ನಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಬಗ್ಗೆ ಅಧಿಕಾರಿಗಳು ಸರಿಯಾದ ಉತ್ತರವನ್ನು ನೀಡದೇ ಏಕಾಏಕಿ ಏಲಂ ಪ್ರಕ್ರಿಯೆ ನಡೆಸಲು ಮುಂದಾಗಿದ್ದಾರೆ. ಇದು ಕಾನೂನು ರೀತಿಯಲ್ಲಿ ಅಪರಾಧವಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಸೋಮನಾಥ್ ನಾಯ್ಕ್ ಅವರು ಗೇಟ್ ಕಳ್ಳತನ ಹಾಗೂ ಪುರಸಭೆಗೆ ಸಂಬಂಧಪಟ್ಟ ಹಳೇ ಗುಜರಿ ಸಾಮಾನುಗಳ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕುರಿತು ಈಗಾಗಲೇ ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.


ಇನ್ನು, ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಮುಖ್ಯಾಧಿಕಾರಿಗಳು ಮಲತಾಯಿ ಧೋರಣೆ ಮಾಡಿರುವುದಕ್ಕೆ ವಿರೋಧ ಪಕ್ಷದ ನಾಯಕರು ಹಾಗೂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷರಾದ ಸುಮಾ ಕೇಶವ್, ಉಪಾಧ್ಯಕ್ಷರಾದ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಮಲ್ಯ ಹಾಗೂ ಪುರಸಭಾ ಮುಖ್ಯಾಧಿಕಾರಿಯಾದ ರೂಪ ಶೆಟ್ಟಿಯವರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest


0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles