ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಆರ್ಥಿಕ ನೆರವು ಮಾಡಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರು ವೈಯಕ್ತಿಕವಾಗಿ ಹರ್ಷ ಅವರ ಕುಟುಂಬಕ್ಕೆ ಒಂದು ಲಕ್ಷ ಆರ್ಥಿಕ ನೆರವು ಮಾಡಿದ್ದು, ಹರ್ಷ ತಾಯಿ ಪದ್ಮ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಾಗೂ ಹರ್ಷ ಅವರ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಅವರು ಒತ್ತಾಯಿಸಿದರು.