Sunday, June 8, 2025

ಮೂಡುಬಿದರೆ: ಪದೋನ್ನತಿಗೊಂಡ ಗ್ರಾಮಕರಣಿಕ ಗೋಪಾಲ್.ಕೆ.ಟಿ. ಅವರಿಗೆ ಸನ್ಮಾನ

ಮೂಡುಬಿದಿರೆ: ಕಂದಾಯ ನಿರೀಕ್ಷಕನಾಗಿ ಪದೋನ್ನತಿ ಹೊಂದಿ ಪುತ್ತೂರಿಗೆ ವರ್ಗಾವಣೆಗೊಂಡ ಗೋಪಾಲ್.ಕೆ.ಟಿ. ಅವರನ್ನು ಪುತ್ತಿಗೆ ಪಂ. ವತಿಯಿಂದ ಬುಧವಾರ ದಂಪತಿ ಸಹಿತ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಗೋಪಾಲ್, ಪುತ್ತಿಗೆ ಮತ್ತು ದರೆಗುಡ್ಡೆ ಪಂ. ವ್ಯಾಪ್ತಿಯ ಜನರು ಸಹಕಾರ ನೀಡಿರುವುದರಿಂದ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಯಿತು. ನನ್ನ ಅವಧಿಯಲ್ಲಿ ಪ್ರತ್ಯೇಕ ಗ್ರಾಮಕರಣಿಕರ ಕಛೇರಿಯ ಕಟ್ಟಡ ಮಾಡಿರುವುದಕ್ಕೆ ಸಂತಸವಿದೆ ಎಂದರು.
ಈ ಸಂದರ್ಭ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ, ಉಪಾಧ್ಯಕ್ಷೆ ತಾಹಿರಾಬಾನು ಮತ್ತು ಸದಸ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಕಾತ್ಯಾಯಿನಿ, ಪ್ರಜ್ಞಾ ಸಲಹಾ ಕೇಂದ್ರದ ವಿಲಿಯಂ ಸ್ಯಾಮುವೆಲ್, ಸಂಶುದ್ದೀನ್ ಉಪಸ್ಥಿತರಿದ್ದರು.

ಗೋಪಾಲ್ ಅವರು ತನಗೆ ಸಹಾಯಕ ಸಹೋದ್ಯೋಗಿ ಕಿಶೋರ್ ಅವರನ್ನು ಗೌರವಿಸಿದರು. ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳೆದ ಆರೂವರೆ ವರ್ಷಗಳಿಂದ ಗ್ರಾಮಕರಣಿಕರಾಗಿ ಸೇವೆ ಸಲ್ಲಿಸಿ ಪುತ್ತೂರಿಗೆ ವರ್ಗಾವಣೆಗೊಂಡಿದ್ದಾರೆ.
ಪಿಡಿಒ ಸುನೀತಾ ಜಿ.ಕೋಟ್ಯಾನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ, ಸಿಬ್ಬಂದಿ ಸಂಜೀವ ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles