ಮೂಡುಬಿದಿರೆ: ಸಮೂಹ ಸಂಪನ್ಮೂಲ ಕೇಂದ್ರ ಬೆಳುವಾಯಿ ಇದರ ಆಶ್ರಯದಲ್ಲಿ ಬರುವ 12 ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಮೂಡುಬಿದರೆ ಸ.ಹಿ.ಪ್ರಾ. ಶಾಲೆ ಪಾಡ್ಯಾರ್ ಇಲ್ಲಿನ ವಿಶ್ವವಿದ್ಯಾಲಯ ಘಟಕ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಸಂಯೋಜಕರಾದ ಶಶಿಕಲಾ ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಸುಚಿತ್ರ ಗೊನ್ಸಾಲ್ವಿಸ್ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ನೀಡಿದರು. ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಶಾಲೆಗಳಲ್ಲಿ ಕೈಗೊಂಡ ನಿರ್ಣಯ ಮತ್ತು ಶಾಲೆಗಳ ಯಶೋಗಾಥೆಯನ್ನು ಮಂಡಿಸಿ ಮೂಡುಬಿದಿರೆ ಸಬ್ಇನ್ಸ್ಪೆಕ್ಟರ್ ಸುದೀಪ್ ಅಪರಾಧ ತಡೆ ಮತ್ತು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು. ವೇದನ್ ಟ್ರಸ್ಟ್ ಬೆಂಗಳೂರು ಇದರ ಮೂಡುಬಿದ್ರೆ ವಲಯ ಸಂಯೋಜಕಿ ಕುಮಾರಿ ಸುಹಾಸಿನಿ ಸ್ವಚ್ಛ ವಿದ್ಯಾಲಯದ ಬಗ್ಗೆ ಮಾಹಿತಿ ನೀಡಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ ಶೆಣೈ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.