ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬೈಂದೂರು ಹಿಂದೂಪರ ಸಂಘಟನೆಗಳ ಪ್ರಮುಖರು ಸೋಮವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಬೈಂದೂರಿನ ಮಾಜಿ ಜಿ.ಪಂ. ಸದಸ್ಯರಾದ ಬಾಬು ಹೆಗಡೆ, ಸುರೇಶ್ ಬಟವಾಡಿ, ಮಾಜಿ ತಾ.ಪಂ. ಅಧ್ಯಕ್ಷ ಮಹೇಂದ್ರ ಪೂಜಾರಿ, ಮಾಜಿ ಪಡುವರಿ ಗ್ರಾ.ಪಂ. ಅಧ್ಯಕ್ಷ ಸದಾಶಿವ ಪಡುವರಿ, ಮಾಜಿ ತಾ.ಪಂ. ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ, ಪಡುವರಿಯ ಶ್ರೀಪತಿ, ದಿನೇಶ್ ಶಿರೂರು, ಶಿವಮೊಗ್ಗ ನಗರ ಅಧ್ಯಕ್ಷ ಜಗದೀಶ್ ಮತ್ತಿತರ ಪಕ್ಷದ ಮುಖಂಡರು ಉಪಸ್ಥಿತರಿದ್ದರು.