ಕಾರ್ಕಳ: ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಬ್ರಹ್ಮರಥೋತ್ಸವ ಸಂಭ್ರಮ ಜರುಗಿತು.
ಮಹಾಪೂಜೆ ,ಉತ್ಸವ ಬಲಿ, ರಥಾರೋಹಣ, ಮಹಾ ಅನ್ನಸಂತರ್ಪಣೆ ನಡೆದು ಸಾವಿರಾರು ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು. ರಾತ್ರಿ ಬ್ರಹ್ಮರಥದಲ್ಲಿ ಹೂವಿನ ಪೂಜೆಯ ಸೇವೆ, ಬ್ರಹ್ಮರಥೋತ್ಸವ, ಭೂತಬಲಿ, ಕವಾಟ ಬಂಧನ ನಡೆಯಿತು. ಅಪಾರ ಸಂಖ್ಯೆಯ ಭಕ್ತಾದಿಗಳು ಬ್ರಹ್ಮರಥೋತ್ಸವಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.


ಈ ಸಂದರ್ಭ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಎಚ್. ಶೆಟ್ಟಿ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಅರುಣ್ ಕುಮಾರ್ ಎಸ್.ವಿ. , ಪವಿತ್ರಪಾಣಿ ರಾಮ ಮಡ್ಮಣ್ಣಾಯ, ಪ್ರಧಾನ ಅರ್ಚಕ ವೇ.ರಾಮದಾಸ ಆಚಾರ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಶ್ರೀ ದೇವಳದ ಸಿಬ್ಬಂದಿ ವರ್ಗ ಮತ್ತು ಇನ್ನಾ , ಮುಂಡ್ಕೂರು, ಮುಲ್ಲಡ್ಕ ಗ್ರಾಮಸ್ಥರು ಉಪಸ್ಥಿತರಿದ್ದರು.