ಉಳ್ಳಾಲ: ಪತ್ನಿಯನ್ನು ಪತಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಜೋಸೆಫ್ ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಕೊಲೆಯಾದ ಮಹಿಳೆಯನ್ನು ಶೈಮಾ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಪತಿ ಪತ್ನಿಯರ ನಡುವೆ ನಡೆದ ಕ್ಷುಲ್ಲಕ ಕಾರಣದಿಂದ ಕೋಪಗೊಂಡಿದ್ದ ಪತಿ ಪತ್ನಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಬಳಿಕ ಶೈಮಾಳಿಗೆ ವಿಷವನ್ನು ಕುಡಿಸಿದ್ದ. ತಕ್ಷಣ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದೇ ದಿನ ರಾತ್ರಿ ಅವರು ಮೃತಪಟ್ಟಿದ್ದರು.
ಮಗಳ ಸಾವಿನ ಬಗ್ಗೆ ಅನುಮಾನಗೊಂಡ ಶೈಮಾ ಅವರ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಜೋಸೆಫ್ನನ್ನು ಬಂಧಿಸಿ ತನಿಖೆ ನಡೆಸಿದ್ದು, ಈ ವೇಳೆ ಆರೋಪಿ ಜೋಸೆಫ್ ಆಕೆ ವಿಷ ಕುಡಿದು ಗಂಭೀರ ಸ್ಥಿತಿಯಲ್ಲಿದ್ದಳು ಎಂದು ತಿಳಿಸಿದ್ದ. ಇನ್ನು ಶೈಮಾ ಅವರ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಆರೋಪಿಯ ಕೊಲೆ ಕೃತ್ಯ ಬಹಿರಂಗಗೊಂಡಿದ್ದು, ಆರೋಪಿಯನ್ನು ಬಂಧಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚುವರಿ ತನಿಖೆಗೆ ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.