ಮಣಿಪಾಲ: ಮನೆಯ ವಾಸ್ತವ್ಯದ ವಿಚಾರದಲ್ಲಿ ಅಣ್ಣ ತಮ್ಮನ ನಡುವೆ ಜಗಳವಾಗಿ ತಮ್ಮನೇ ಅಣ್ಣನನ್ನು ಕೊಲೆ ಮಾಡಿದ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ಬುಧವಾರ ನಡೆದಿದೆ.
ಕಬ್ಯಾಡಿ ಕಂಬಳಕಟ್ಟ ನಿವಾಸಿ 43 ವರ್ಷದ ಬಾಲಕೃಷ್ಣ ನಾಯ್ಕ್ ಕೊಲೆಯಾದ ವ್ಯಕ್ತಿ. ಮಾ.16ರ ಸಂಜೆ 6.30ಕ್ಕೆ ಬಾಲಕೃಷ್ಣ ಹಾಗೂ ಅವರ ಸಹೋದರ ದಯಾನಂದ ಅವರ ನಡುವೆ ಮನೆಯ ವಾಸ್ತವ್ಯದ ವಿಚಾರದಲ್ಲಿ ಜಗಳವಾಗಿದೆ. ಈ ದ್ವೇಷದಿಂದ ದಯಾನಂದ ಕತ್ತಿಯಿಂದ ಬಾಲಕೃಷ್ಣ ಅವರ ತಲೆಗೆ ಹಲ್ಲೆ ಮಾಡಿದ್ದಾನೆ. ಇದರಿಂದ ಬಾಲಕೃಷ್ಣ ಅವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ವಿಚಾರದಲ್ಲಿ ಅಣ್ಣ ತಮ್ಮನ ಜಗಳ; ತಮ್ಮನಿಂದ ಅಣ್ಣನ ಹತ್ಯೆ
Subscribe
Login
0 Comments