ಮಂಗಳೂರು: ಮಂಗಳೂರಿನಲ್ಲಿ ಹಿಜಾಬ್ ವಿವಾದ ಮತ್ತೆ ಮುಂದುವರಿದಿದ್ದು, ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ಬಂದಿದ್ದನ್ನು ವಿರೋಧಿಸಿ ಇತರ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದರು. ಯೂನಿವರ್ಸಿಟಿ ರಿಜಿಸ್ಟರ್ ಕಿಶೋರ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಿಜಾಬ್ ನಿಯಮ ಕಾಲೇಜಿನಲ್ಲಿ ತರಬೇಕು ಎಂದು ಅವರಿಗೆ ಮನವಿಯನ್ನು ಸಲ್ಲಿಸಿದ್ದರು.
ಇದೀಗ ಇಂದು ಕೂಡ ಈ ವಿವಾದ ಮುಂದುವರಿದಿದ್ದು, ಸುಮಾರು 15 ಮಂದಿ ಹಿಜಾಬ್ ಧಾರಿ ಮುಸ್ಲಿಂ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಡಿಗ್ರಿ ಕಾಲೇಜಿಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಿಂದೆ ಎರಡು ಬಾರಿ ಈ ವಿದ್ಯಾರ್ಥಿನಿಯರು ಡಿಸಿಯವರಿಗೆ ಮನವಿ ಮಾಡಿದ್ದರು. ಇದೀಗ ಮತ್ತೆ ಮನವಿ ಮಾಡಿಕೊಳ್ಳಲು ಮುಂದಾದ ಮುಸ್ಲಿಂ ವಿದ್ಯಾರ್ಥಿನಿಯರು, ಜಿಲ್ಲಾಧಿಕಾರಿಗಳು ಬರುವ ತನಕ ಇಲ್ಲೆ ಇರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.
ಹಿಜಾಬ್ ಧರಿಸಿ ತರಗತಿ ಪ್ರವೇಶ ಅನುಮತಿ ಕೋರಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ಕೊಟ್ಟ ಮುಸ್ಲಿಂ ವಿದ್ಯಾರ್ಥಿನಿಯರು
Subscribe
Login
0 Comments