ದೆಹಲಿ: ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಕೊವಿಡ್ ಲಸಿಕೆ ಪಡೆದುಕೊಳ್ಳುವ ಮಾರ್ಗಸೂಚಿಯನ್ನು ವ್ಯಕ್ತಿಯ ಒಪ್ಪಿಗೆ ತೆಗೆದುಕೊಳ್ಳದೆ ಬಲವಂತವಾಗಿ ಲಸಿಕೆ ನೀಡುವುದಿಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರವು ಲಸಿಕೆ ಪ್ರಮಾಣಪತ್ರ ಪಡೆಯುವುದಕ್ಕಾಗಿ ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು, ಯಾವುದೇ ಉದ್ದೇಶಕ್ಕಾಗಿ ಲಸಿಕೆ ಪ್ರಮಾಣಪತ್ರ ಕೊಂಡೊಯ್ಯುವುದನ್ನು ಕಡ್ಡಾಯ ಮಾಡುವ ಯಾವುದೇ ಎಸ್ಒಪಿ ನೀಡಿಲ್ಲವೆಂದು ಸುಪ್ರೀಂಕೋರ್ಟ್ಗೆ ತಿಳಿಸಿದೆ. ಇದನ್ನು ಕೇಂದ್ರ ಸರ್ಕಾರವು ಎನ್ಜಿಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.
ಈ ಅಫಿಡವಿಟ್ನಲ್ಲಿ “ಭಾರತ ಸರ್ಕಾರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವಂತಹ ಮಾರ್ಗಸೂಚಿ ಹಾಗೂ ನಿರ್ದೇಶನಗಳಿಗೆ ಸಂಬಂಧಿಸಿದ ವ್ಯಕ್ತಿಯ ಒಪ್ಪಿಗೆಯನ್ನು ತೆಗೆದುಕೊಳ್ಳದೆ ಯಾವುದೇ ಬಲವಂತದಿಂದ ಲಸಿಕೆ ನೀಡುವುದಿಲ್ಲವೆಂದು ತಿಳಿಸಿದೆ. ಯಾವುದೇ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಲಸಿಕೆ ತೆಗೆದುಕೊಳ್ಳುವಂತೆ ಒತ್ತಾಯ ಮಾಡುವಂತಿಲ್ಲ” ಎಂದು ತಿಳಿಸಲಾಗಿದೆ.