ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿರುವ 1.20 ಕೋಟಿ ಮಕ್ಕಳ ಪೈಕಿ 500-600 ಮಕ್ಕಳು ಮಾತ್ರ ಹಿಜಾಬ್ ಧರಿಸಿ ಬರುತ್ತೇವೆಂದು ಹಠ ಹಿಡಿದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ನಡೆಯುತ್ತಿದ್ದು, ಬಹುತೇಕ ನಾಳೆ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಶಾಲೆಗೆ ಬರುವ ವಿಶ್ವಾಸವಿದೆ. 5300 ಪಿಯುಸಿ ಕಾಲೇಜುಗಳ ಪೈಕಿ ಕೇವಲ ನಾಲ್ಕು ಕಾಲೇಜಿನ ಮಕ್ಕಳು ಹಿಜಾಬ್ ಧರಿಸಿ ಬರಲು ಪಟ್ಟು ಹಿಡಿದಿದ್ದು, ಅವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಹೈಕೋರ್ಟ್ನ ಆದೇಶವನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಪಾಲಿಸುತ್ತಿರುವುದು ಸಂತೋಷದ ಸಂಗತಿ ಎಂದು ಸಚಿವ ಬಿ.ಸಿ. ನಾಗೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.